State News

ಧಾರವಾಡ ಜಿಲ್ಲೆ ಅನ್ ಲಾಕ್ ಕುರಿತು ಪರಿಷ್ಕೃತ ಆದೇಶ ಸಚಿವ ಜಗದೀಶ್ ಶೆಟ್ಟರ್

WhatsApp Group Join Now
Telegram Group Join Now

 

ಹುಬ್ಬಳ್ಳಿ: ರಾಜ್ಯ ಸರ್ಕಾರ ಕೋವಿಡ್ ಅನ್‌ಲಾಕ್ ಕುರಿತು ಹೊರಡಿಸಿದ ಆದೇಶದಲ್ಲಿ ಧಾರವಾಡ ಜಿಲ್ಲೆ ಬಿಟ್ಟು ಹೋಗಿತ್ತು. ಈ ಕುರಿತು ಮುಖ್ಯಮಂತ್ರಿ, ಆರೋಗ್ಯ ಸಚಿವರು ಹಾಗೂ ಸರ್ಕಾರದ ಕಾರ್ಯದರ್ಶಿಯೊಂದಿಗೆ ಚರ್ಚಿಸಿದ್ದೇನೆ. ಜಿಲ್ಲೆಯಲ್ಲಿ 10 ದಿನಗಳ ಕೋವಿಡ್ ಪಾಸಿಟಿವಿಟಿ ಸರಾಸರಿ ದರ ಶೇ.4.5 ರಷ್ಟಿದೆ. ಧಾರವಾಡ ಜಿಲ್ಲೆಗೂ ಅನ್‌ಲಾಕ್ ಆದೇಶ ವಿಸ್ತರಿಸಿ ಸರ್ಕಾರದಿಂದ ಪರಿಷ್ಕೃತ ಆದೇಶ ಹೊರಡಿಸಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಾರ್ವಜನಿಕ ಉದ್ದಿಮೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ್ ಶೆಟ್ಟರ್ ಹೇಳಿದರು.

ಹುಬ್ಬಳ್ಳಿ ಪ್ರವಾಸಿ ಮಂದಿರದಲ್ಲಿ ಜಿಲ್ಲೆಯಲ್ಲಿನ ಕೋವಿಡ್ ಸ್ಥಿತಿಗತಿ ಹಾಗೂ ಕೋವಿಡ್ ಲಸಿಕಾ ಅಭಿಯಾನದ ಕುರಿತು ಅಧಿಕಾರಿಗಳ ಸಭೆ ನಡೆಸಿ, ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ಐ.ಸಿ.ಎಂ.ಆರ್ ವರದಿಯಲ್ಲಿ ಜಿಲ್ಲೆಯ ಪಾಸಿಟಿವಿಟಿ ದರ ಶೇ.5 ಕ್ಕಿಂತಲೂ ಕಡಿಮೆಯಿದೆ. ಆದರೆ ಸ್ಟೇಟ್ ವಾರ್ ರೂಮ್‌ನಿಂದ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಜರುಗಿದ ಸಭೆಗೆ ಧಾರವಾಡ ಜಿಲ್ಲೆಯ ಪಾಸಿಟಿವಿ ದರ ಶೇ.5.7 ರಷ್ಟಿದೆ ಎಂದು ಮಾಹಿತಿ ನೀಡಿದ್ದಾರೆ. ಹಾಗಾಗಿ ಅನ್‌ಲಾಕ್ ಆದೇಶದಲ್ಲಿ ಜಿಲ್ಲೆಯ ಹೆಸರು ಕೈಬಿಟ್ಟಿತ್ತು.

ಜಿಲ್ಲೆಯಲ್ಲಿ ಜನರು ಲಾಕ್‌ಡೌನ್ ಸಂದರ್ಭದಲ್ಲಿ ಹೆಚ್ಚಿನ ಸಹಕಾರ ನೀಡಿದ್ದಾರೆ. ಹುಬ್ಬಳ್ಳಿ ವ್ಯಾಪಾರ ವಹಿವಾಟಿಗೆ ಹೆಸರಾಗಿದೆ. ಅಕ್ಕಪಕ್ಕದ ಜಿ್ಳಲ್ಲೆಗಳ ಹಾಗೆ ಧಾರವಾಡ ಜಿ್ಳಲ್ಲೆಯನ್ನು ಸಹ ಸ್ವಾಭಾವಿಕವಾಗಿ ಅನ್‌ಲಾಕ್ ಮಾಡಬೇಕು. ಸರ್ಕಾರ ಹೊರಡಿಸಿದ ಅನ್‌ಲಾಕ್ ಮಾರ್ಗಸೂಚಿಗಳನ್ನು ಯಥಾವತ್ತಾಗಿ ಜಿಲ್ಲೆಯಲ್ಲಿ ಪಾಲಿಸಲಾಗುವುದು. ಈ ಬಾರಿ ಅನ್‌ಲಾಕ್ ಮಾರ್ಗಸೂಚಿಯಲ್ಲಿ ವ್ಯಾಪಾರ ವಹಿವಾಟಿಗಳಿಗೆ ಸಮಯ ಹೆಚ್ಚಿಸಲಾಗಿದೆ. ಬಿ.ಆರ್.ಟಿ.ಎಸ್ ಸೇರಿದಂತೆ ಅಂತರ್ ಜಿಲ್ಲಾ ಬಸ್ ಓಡಾಟ ಪ್ರಾರಂಭವಾಗವುದು. ಅಂತರಾಜ್ಯ ಬಸ್ ಓಡಾಟಗಳ ಬಗ್ಗೆ ರಾಜ್ಯ ಮಟ್ಟದಲ್ಲಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದರು.

ಕೋವಿಡ್ ಲಸಿಕಾ ಮೇಳಕ್ಕೆ ಚಾಲನೆ

ಪ್ರಧಾನಿ ಮಂತ್ರಿಯವರ ಆಶ್ವಾಸನೆಯಂತೆ ನಾಳೆ ಜೂನ್ 21 ರಂದು ಕೋವಿಡ್ ಲಸಿಕಾ ಮೇಳಕ್ಕೆ ಚಾಲನೆ ನೀಡಲಾಗುವುದು. 45 ವರ್ಷ ಮೇಲ್ಪಟ್ಟ ಎಲ್ಲರಿಗೂ ಹಾಗೂ 18 ವರ್ಷ ಮೇಲ್ಪಟ್ಟ ಆರೋಗ್ಯ ಹಾಗೂ ಮಂಚೂಣಿ ಕಾರ್ಯಕರ್ತರು, ಸರ್ಕಾರ ಸೂಚಿಸಿದ ಆದ್ಯತಾ ಗುಂಪುಗಳಿಗೆ ಲಸಿಕೆ ನೀಡಲಾಗುವುದು. ಯುವ ಜನರು ಗೊಂದಲಕ್ಕೆ ಈಡಾಗುವುದು ಬೇಡ, 18 ವರ್ಷ ಮೇಲ್ಪಟ್ಟ ಮಂಚೂಣಿ ಕಾರ್ಯಕರ್ತರು ಹಾಗೂ ಆದ್ಯತಾ ಗುಂಪುಗೆ ಸೇರಿದವರು ಮಾತ್ರ ಲಸಿಕಾ ಕೇಂದ್ರಗಳಿಗೆ ತೆರಳಿ ಲಸಿಕೆ ಪಡೆಯಬೇಕು.‌

ಜಿಲ್ಲೆಯಲ್ಲಿ ಸದ್ಯ 38020 ಕೋವಿಡ್‌ಶೀಲ್ಡ್, 12460 ಕೋವ್ಯಾಕ್ಸಿನ್ ಸೇರಿದಂತೆ ಒಟ್ಟು 50480 ಲಸಿಕೆ ಲಭ್ಯಯಿವೆ. ಜೂನ್ 21 ರಂದು‌ 27000 ಜನರಿಗೆ ಕೋವಿಡ್ ಲಸಿಕೆ ನೀಡುವ ಗುರಿ ಹೊಂದಲಾಗಿದೆ. ಜಿಲ್ಲೆಯಲ್ಲಿ 201 ಲಸಿಕಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಹುಬ್ಬಳ್ಳಿ ಧಾರವಾಡ ಮಹಾನಗರ ವ್ಯಾಪ್ತಿಯಲ್ಲಿ 67 ವಾರ್ಡ್‌ಗಳಲ್ಲಿ ಲಸಿಕಾ ಕೇಂದ್ರ ತೆರೆಯಲಾಗಿದೆ.

ಹುಬ್ಬಳ್ಳಿ ಕಾರವಾರ ರಸ್ತೆ ಸಿ.ಆರ್. ಮೈದಾನದಲ್ಲಿ ಪೊಲೀಸ್ ಕುಟುಂಬಗಳಿಗೆ ಲಸಿಕೆ ಮೇಳ ಆಯೋಜಿಸಲಾಗಿದ್ದು ಬೆಳಿಗ್ಗೆ 11 ಗಂಟೆಗೆ ಚಾಲನೆ ನೀಡಲಾಗುವುದು.

ಜಿಲ್ಲೆಯಲ್ಲಿ ಲಸಿಕಾ ಮೇಳವನ್ನು ಯಶಸ್ವಿಗೊಳಿಸಲಾಗುವುದು. ಅಗತ್ಯ ಪ್ರಮಾಣದಲ್ಲಿ ಲಸಿಕೆಗಳು ಲಭ್ಯವಾಗಲಿದ್ದು, ಯಾರು ಅವರಸ ಪಡುವ ಅಗತ್ಯವಿಲ್ಲ‌. ಹೆಚ್ಚಿನ ಲಸಿಕೆಗಳು ಆಗಮಿಸಿದಾಗ ಕೈಗಾರಿಕೆ ಸೇರಿದಂತೆ ಹೆಚ್ಚಿನ ಜನರು ಸೇರುವಲ್ಲಿಯೂ ಲಸಿಕೆ ಅಭಿಯಾನ ಆಯೋಜಿಸುವ ಚಿಂತನೆಯಿದೆ. ಲಸಿಕೆಯನ್ನು ಎಲ್ಲರಿಗೂ ಪಡೆಯುವುದೇ, ಕೋವಿಡ್ ಮೂರನೇ ಅಲೆ ಎದುರಿಸಲು ಕೈಗೊಳ್ಳುವ ಸಿದ್ಧತೆಯಾಗಿದೆ. ಜನರು ಅನ್‌ಲಾಕ್ ಸಮಯದಲ್ಲಿ ಮೈಮರೆಯದೆ ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ರಾಜ್ಯ ಹಾಗೂ ಜಿ್ಳಲ್ಲೆಯಲ್ಲಿ ಮೆಡಿಕಲ್ ಆಕ್ಸಿಜನ್ ಬೇಡಿಕೆ ಸ್ವಲ್ಪ ಪ್ರಮಾಣದಲ್ಲಿ ಕಡಿಮೆಯಾಗಿದೆ. ಪ್ರತಿ ಜಿಲ್ಲಾ ವ್ಯಾಪ್ತಿಯಲ್ಲಿ 10 ಮೆಟ್ರಿಕ್ ಟನ್ ಆಕ್ಸಿಜನ್ ಉತ್ಪಾದನೆ ಘಟಕಗಳನ್ನು ಸ್ಥಾಪಿಸಲಾಗುತ್ತಿದೆ. ತುರ್ತು ಸಂದರ್ಭಕ್ಕಾಗಿ ಅಗತ್ಯ ಆಕ್ಸಿಜನ್‌ ಸಹ ಸಂಗ್ರಹಿಸಿಡಲಾಗುತ್ತಿದೆ. ಆದ್ಯತೆ ಮೇರೆಗೆ ಕೈಗಾರಿಕೆಗಳಿಗೆ ಆಕ್ಸಿಜನ್ ಪೂರೈಕೆ ಮಾಡಲಾಗುವುದು ಎಂದು ಸಚಿವ ಜಗದೀಶ್ ಶೆಟ್ಟರ್ ಹೇಳಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್, ಪೊಲೀಸ್ ಆಯುಕ್ತ ಲಾಭುರಾಮ್, ಜಿ.ಪಂ.ಸಿ.ಇ.ಓ ಡಾ.ಬಿ.ಸುಶೀಲ, ಮಹಾನಗರ ಪಾಲಿಕೆ ಆಯುಕ್ತ ಡಾ.ಸುರೇಶ್ ಇಟ್ನಾಳ್, ಪೊಲೀಸ್ ವರಿಷ್ಠಾಧಿಕಾರಿ ಪಿ.ಕೃಷ್ಣಕಾಂತ್, ಉಪ ವಿಭಾಗಾಧಿಕಾರಿ ಗೋಪಾಲಕೃಷ್ಣ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಶವಂತ ಮದೀನಕರ್, ಜಿಲ್ಲಾ ಆರ್.ಸಿ.ಹೆಚ್.ಓ ಡಾ.ಎಸ್.ಎಮ್.ಹೊನಕೇರಿ, ತಹಶೀಲ್ದಾರ್ ಶಶಿಧರ ಮಾಡ್ಯಾಳ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

WhatsApp Group Join Now
Telegram Group Join Now

Related Posts

1 of 104
error: Content is protected !!