ಹುಬ್ಬಳ್ಳಿ, ಡಿಸೆಂಬರ್ 24: ಅವಧಿ ಪೂರ್ವ ಚುನಾವಣೆ (early poll) ಮಾಡುವ ಯೋಚನೆಯನ್ನು ನಮ್ಮ ಸರ್ಕಾರ ಅಥವಾ ಪಕ್ಷ ಮಾಡಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಜನರಿಗೆ ನಮ್ಮ ಕಾರ್ಯಕ್ರಮ ಮುಟ್ಟಿಸಿ, ಆ ವರದಿಯ ಆಧಾರದ ಮೇಲೆ ಸಕಾರಾತ್ಮಕ ಜನಾದೇಶ ಪಡೆಯಲು ನಾವು ಪ್ರಯತ್ನ ಮಾಡು ತ್ತಿದ್ದೇವೆ. ಬಹುಶಃ ಕಾಂಗ್ರೆಸ್ ಗೆ ಸಮಯ ಕೊಟ್ಟಷ್ಟು ಅವರ ಒಳಜಗಳ ಹೆಚ್ಚಾಗುತ್ತದೆ ಎಂದು ಅಭದ್ರತೆ ಕಾಡುತ್ತಿದೆ. ಚುನಾವಣೆ ಮುಂಚೆಯಾಗುತ್ತದೆ ಜಗಳವಾಡಬೇಡಿ ಎಂದು ಕಾಂಗ್ರೆಸ್ ನ ಕಾರ್ಯಕರ್ತರಿಗೆ ನೀಡಿರುವ ಸಂದೇಶ ಎಂದರು.
The Hubli Express is on WhatsApp now, you can join the WhatsApp group by clicking the link >>>>> https://chat.whatsapp.com/Hrmohnx3bkrEJRIv9kQsyD >>>>>>> You can follow us on Facebook @HubliExpress